ಎಸ್ಎಸ್ ಆಸ್ಪತ್ರೆಯ ಒತ್ತುವರಿಗೆ ಹೈಕೋರ್ಟ್ ತಾತ್ಕಾಲಿಕ ತಡೆ
ಬೆಂಗಳೂರು:, ಅ.21: ರಾಜರಾಜೇಶ್ವರಿ ನಗರದಲ್ಲಿರುವ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರ ಮಾಲಕತ್ವದ ಎಸ್ ಎಸ್ ಆಸ್ಪತ್ರೆಯನ್ನು ವಶಕ್ಕೆ ಪಡೆಯುವ ಜಿಲ್ಲಾಡಳಿತದ ಕ್ರಮಕ್ಕೆ ರಾಜ್ಯ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಆಸ್ಪತ್ರೆಯ ಸಂಪೂರ್ಣ ದಾಖಲೆಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಸಲ್ಲಿಸುವಂತೆ ಇದೇ ವೇಳೆ ಹೈಕೋರ್ಟ್ ಸೂಚಿಸಿದೆ ದಾಖಲೆ ಪರಿಶೀಲಿಸಿದ ಬಳಿಕ ಪ್ರಾಧಿಕಾರ ನೀಡುವ ವರದಿಯನ್ನಾಧರಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸಿ ಆಸ್ಪತ್ರೆಯ ಮಾಲಕರು ರಾಜ್ಯ ಹೈಕೋರ್ಟ್ನ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರು, ಆಸ್ಪತ್ರೆಗೆ ಸಂಬಂಧಿಸಿದ ದಾಖಲೆಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಸಲ್ಲಿಸುವಂತೆ ಆದೇಶ ನೀಡಿದರು ಎಂದು ತಿಳಿದು ಬಂದಿದೆ.
Next Story