ಸಾಹಿತಿ ಕಾರ್ನಾಡ್ಗೆ ಅಪಘಾತ ಸುಳ್ಳು ವದಂತಿ
ಬೆಂಗಳೂರು, ನ.25: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಅಪಘಾತದಲ್ಲಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಸುಳ್ಳು ವದಂತಿ ಹರಡಿದ್ದು, ಆದರೆ ಅವರಿಗೆ ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ಚಿತ್ರ ನಿರ್ಮಾಪಕ ಕೆ.ಎಂ ಚೈತನ್ಯ ದೃಢಪಡಿಸಿದ್ದಾರೆ.
ಕಾರ್ನಾಡ್ ಗೋವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂಬ ಸುದ್ದಿ ಮಧ್ಯಾಹ್ನದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.
ಕಾರ್ನಾಡ್ ಅಪಘಾತದಿಂದ ಗಾಯಗೊಂಡಿದ್ದಾರೆ ಎನ್ನುವುದು ಸುಳ್ಳು ಸುದ್ದಿ. ಅವರಿಗೆ ಏನು ಆಗಿಲ್ಲ ಎಂದು ಫೇಸ್ಬುಕ್ನಲ್ಲಿ ಕೆ.ಎಂ ಚೈತನ್ಯ ಸ್ಪಷ್ಟಪಡಿಸಿದ್ದಾರೆ.
Next Story