ರಾಮನಗರ: ಚಲಿಸುತ್ತಿದ್ದ ಬಸ್ಗೆ ಬೆಂಕಿ
ರಾಮನಗರ, ಡಿ.3: ಚನ್ನಪಟ್ಟಣ ತಾಲೂಕಿನ ಮುದಗೆರೆ ಬಳಿ ಶಾಲಾ ಮಕ್ಕಳ ಪ್ರವಾಸ ಹೊರಟಿದ್ದ ಬಿಎಂಟಿಸಿ ಬಸ್ಸೊಂದು ಹೊತ್ತಿ ಉರಿದ ಘಟನೆ ಇಂದು ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
ಬೆಂಗಳೂರಿನ ಜಾಲಹಳ್ಳಿ ಕ್ರಾಸ್ನ ಬಿಎಂಎಲ್ ಶಾಲೆಯ ವಿದ್ಯಾರ್ಥಿಗಳು ಮೈಸೂರಿಗೆ ಬಸ್ನಲ್ಲಿ ಪ್ರವಾಸ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಬಸ್ ಮುದಗೆರೆ ತಲುಪುವ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ. ಬೆಂಕಿಗಾವುತಿಯಾದ ಬಸ್ನಲ್ಲಿ ಸುಮಾರು 52 ಹೈಸ್ಕೂಲ್ ವಿದ್ಯಾರ್ಥಿಗಳಿದ್ದರು ಎಂದು ಹೇಳಲಾಗಿದೆ.
Next Story