ಭತ್ತದ ಬಣವೆಗೆ ಬೆಂಕಿ: ಅಧಿಕ ಭತ್ತ ಭಸ್ಮ
ತೀರ್ಥಹಳ್ಳಿ,ಜ.18: ತಾಲೂಕಿನ ತ್ರಿಯಂಬಕಪುರ ಗ್ರಾಪಂ ವ್ಯಾಪ್ತಿಯ ಹಲ್ಲೇಪುರ ಗ್ರಾಮದ ವಿಜಯಲಕ್ಷ್ಮೀ ಮತ್ತು ತಮ್ಮಯ್ಯ ನಾಯ್ಕರ ಭತ್ತದ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಅಗ್ನಿಗೆ ಆಹುತಿಯಾದ ಘಟನೆ ವರದಿಯಾಗಿದೆ.
ಆಕಸ್ಮಿಕ ಬೆಂಕಿ ತಗುಲಿ ಎರಡು ಭತ್ತದ ಗೊಣವೆಗಳು ಸಂಪೂರ್ಣ ನಾಶವಾಗಿದ್ದು, ಅಂದಾಜು 90 ಕ್ವಿಂಟಾಲ್ ಭತ್ತ ಹಾಗೂ ಹುಲ್ಲು ನಷ್ಟವಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಗ್ರಾಮಸ್ಥರು ಅಗ್ನಿ ನಂದಿಸಲು ಹರಸಾಹಸಪಟ್ಟರು. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ನಷ್ಟಕ್ಕೊಳಗಾದ ರೈತ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Next Story