ಶಿವಮೊಗ್ಗ: ಅತ್ಯಾಚಾರಕ್ಕೆ ಯತ್ನ ಪ್ರಕರಣ
ಓರ್ವ ಬಾಲಾಪರಾಧಿ ಸಹಿತ ಈರ್ವರ ವಿರುದ್ಧ ಕೇಸ್
ಶಿವಮೊಗ್ಗ, ಜ. 21: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಣಗೆರೆಕಟ್ಟೆಯಲ್ಲಿ ಇತ್ತೀಚೆಗೆ ಇಬ್ಬರು ಯುವತಿಯರ ಮೇಲೆ ಅತ್ಯಾಚಾರಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಪರಾಧಿ ಸೇರಿದಂತೆ ಇಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತ್ತೊಂದೆಡೆ ನಾಪತ್ತೆಯಾಗಿದ್ದ ಯುವತಿಯರ ಸುಳಿವು ಪತ್ತೆ ಹಚ್ಚಿರುವ ಪೊಲೀಸರು, ಅವರಿಂದ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಲು ಹರಸಾಹಸ ನಡೆಸುತ್ತಿದ್ದಾರೆ.
ಹಣಗೆರೆಕಟ್ಟೆಯಲ್ಲಿ ದಿನಸಿ ಅಂಗಡಿಯಿಟ್ಟುಕೊಂಡಿರುವ ಸೈಯದ್(22) ಹಾಗೂ ಹಣಗೆರೆಕಟ್ಟೆಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿ ಸುತ್ತಿರುವ, ಮೂಲತಃ ಶಿವಮೊಗ್ಗ ನಗರದ ನಿವಾಸಿ 17 ವರ್ಷ ಪ್ರಾಯದ ಅಪ್ರಾಪ್ತ ಬಾಲಕ ಬಂಧಿತ ಆರೋಪಿಗಳು ಎಂದು ಗುರುತಿಸ ಲಾಗಿದೆ.
ಸೈಯದ್ನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿರುವ ಪೊಲೀಸರು, ಅಪ್ರಾಪ್ತ ಬಾಲಕನನ್ನು ಬಾಲ ನ್ಯಾಯ ಮಂಡಳಿಯ ಮುಂಭಾಗ ಹಾಜರುಪಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯರು ದೂರು ನೀಡದ ಹಿನ್ನೆಲೆಯಲ್ಲಿ ಪೊಲೀಸರೇ ಸ್ವುಂಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡು ಸ್ಥಳೀಯ ನಾಗರಿಕರು ನೀಡಿದ ಮಾಹಿತಿಯ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಸಂಬಂಧ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.