ಹಳೆ ದ್ವೇಷ: ವ್ಯಕ್ತಿಯ ಕೊಲೆ
ಚಿಕ್ಕಮಗಳೂರು, ಜ.21: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಆಲ್ದೂರು ಬಳಿಯ ಪುರ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕವೀಶ್(40) ಎಂದು ಗುರುತಿಸಲಾಗಿದೆ. ಮೃತಪಟ್ಟ ವ್ಯಕ್ತಿ ಹಾಗೂ ಗ್ರಾಮಸ್ಥರ ನಡುವೆ ಸಮುದಾಯ ಭವನದ ವಿಚಾರದಲ್ಲಿ ಗಲಾಟೆಯಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈಮನಸ್ಸು ಹೊಂದಿದ್ದ ಆರೋಪಿ ಸುನೀಲ್ ಶನಿವಾರ ಕವೀಶ್ ಮೇಲೆ ದಾಳಿ ನಡೆಸಿದ್ದಾನೆ. ಆರೋಪಿಯು ಕವೀಶ್ ಮೇಲೆ ಹಲವು ಸಲ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ.
ಮೃತ ಕವೀಶ್ ಆಲ್ದೂರು ಗ್ರಾಮ ಪಂಚಾಯತ್ನ ಮಾಜಿ ಸದಸ್ಯರಾಗಿದ್ದರು. ಘಟನೆ ಕುರಿತು ಅಲ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story