Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಮೂಡಲಪಾಯ ನೇಪಥ್ಯದ ಅಂಚಿಗೆ...

​ಮೂಡಲಪಾಯ ನೇಪಥ್ಯದ ಅಂಚಿಗೆ ಸರಿಯುತ್ತಿದೆ: ನಾ.ಡಿಸೋಜ ಆತಂಕ

ವಾರ್ತಾಭಾರತಿವಾರ್ತಾಭಾರತಿ12 Feb 2017 11:11 PM IST
share
​ಮೂಡಲಪಾಯ ನೇಪಥ್ಯದ ಅಂಚಿಗೆ ಸರಿಯುತ್ತಿದೆ: ನಾ.ಡಿಸೋಜ ಆತಂಕ

ಸಾಗರ,ಫೆ.12: ಮಲೆನಾಡು ಭಾಗದ ಅತ್ಯಂತ ಶ್ರೀಮಂತ ಜನಪದ ಕಲೆಯಾಗಿರುವ ಮೂಡಲಪಾಯವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸ ಮಾಡಬೇಕು ಎಂದು ಸಾಹಿತಿ ಡಾ. ನಾ.ಡಿಸೋಜ ತಿಳಿಸಿದರು. ಇಲ್ಲಿನ ಗುರುಭವನದಲ್ಲಿ ಶನಿವಾರ ಕರ್ನಾಟಕ ಯಕ್ಷಗಾನ ಮತ್ತು ಬಯಲಾಟ ಅಕಾಡಮಿ ಹಾಗೂ ಜನಪದ ಕಣಜದ ಕರ್ನಾಟಕ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಮೂಡಲಪಾಯ ಬಯಲಾಟ ತರಬೇತಿ ಕಾರ್ಯಾಗಾರವನ್ನು ಮೃದಂಗ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅತ್ಯಂತ ಮನಮೋಹಕ ಕಲೆಯಾಗಿರುವ ಮೂಡಲಪಾಯ ನೇಪಥ್ಯದ ಅಂಚಿಗೆ ಸರಿಯುತ್ತಿದೆ. ಮಲೆನಾಡಿನ ಜನರು ಬ್ಯಾಡಗಿ, ಹಾವೇರಿಯಂತಹ ಕಡೆಗಳಿಗೆ ಅಡಿಕೆ ವ್ಯಾಪಾರಕ್ಕೆ ಹೋದಾಗ ಮೂಡಲಪಾಯವನ್ನು ಕಲಿತುಕೊಂಡು ಬಂದು, ಇಲ್ಲಿ ಜನಪ್ರಿಯಗೊಳಿಸಿದರು. ಆಧುನಿಕ ಕಲೆಗಳಿಗೆ ಮಾರುಹೋದ ಜನರು ನಂತರದ ದಿನಗಳಲ್ಲಿ ಕೆಲೆಯನ್ನು ಮರೆತುಬಿಟ್ಟಿರುವುದು ವಿಪರ್ಯಾಸ ಎಂದರು.

ಪ್ರತಿಯೊಂದು ಕಲೆಯೂ ಪ್ರಾದೇಶಿಕ ಭಿನ್ನತೆ ಹಾಗೂ ಭೌಗೋಳಿಕ ವಿಶೇಷತೆಯನ್ನು ಹೊಂದಿರುತ್ತದೆ. ಇಂತಹ ಕಲೆಗಳ ಸತ್ವವನ್ನು ಅರಿತುಕೊಂಡು ಅದನ್ನು ನಮ್ಮದಾಗಿಸಿಕೊಳ್ಳುವತ್ತ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ಮೂಡಲಪಾಯ ಕಲೆ ಸುಧಾರಣೆಗೊಳಿಸುವ ನಿಟ್ಟಿನಲ್ಲಿ ವಿದ್ವಾಂಸರು, ಕಲಾವಿದರು, ಕಲಾಪ್ರೇಕ್ಷರು ಹೆಚ್ಚಿನ ಚಿಂತನೆ ನಡೆಸಬೇಕು ಎಂದರು. ಜನಪದ ವಿದ್ವಾಂಸ ಎನ್. ಹುಚ್ಚಪ್ಪ ಮಾಸ್ತರ್ ಮಾತನಾಡಿ, ಒಂದು ಕಾಲದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಅತ್ಯಂತ ವೈಭವತೆಯನ್ನು ಕಂಡುಕೊಂಡಿದ್ದ ಮೂಡಲಪಾಯ ಕಲೆ ಇಂದು ಜನರಿಂದ ಮರೆಯಾಗುತ್ತಿದೆ. ಬೇರೆಬೇರೆ ಆಧುನಿಕ ದೃಶ್ಯ ಮಾಧ್ಯಮಗಳತ್ತ ಜನರು ಆಕರ್ಷಿತರಾಗುತ್ತಿದ್ದಾರೆ.

ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊಸ ಸಂಸ್ಕೃತಿ ಹುಟ್ಟು ಹಾಕಲು ಇಂತಹ ಕಾರ್ಯಾಗಾರಗಳ ಅಗತ್ಯತೆ ಹೆಚ್ಚು ಇದೆ ಎಂದರು. ಜನಪದ ಕಣಜ ಕರ್ನಾಟಕದ ಕಾರ್ಯಾಧ್ಯಕ್ಷ ದೇವೇಂದ್ರ ಬೆಳೆಯೂರು ಅಧ್ಯಕ್ಷತೆ ವಹಿಸಿದ್ದರು. ಮೂಡಲಪಾಯ ಕಲಾವಿದ ಕುಮ್ಮೂರು ರಂಗಪ್ಪ ಸೊರಬ ಹಾಜರಿದ್ದರು. ಶಿವಾನಂದ ಕುಗ್ವೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮೂಡಿಗೆರೆ: ನಾಳೆ ಯೋಧರಿಗೆ ನಮನ
ಮೂಡಿಗೆರೆ, ಫೆ.12: ದೇಶ ಕಾಯುತ್ತಿರುವ ಹಾಗೂ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸುವ ‘ಯೋಧರಿಗಾಗಿ ನಮನ’ ಕಾರ್ಯಕ್ರಮವನ್ನು ಫೆ.14ರಂದು ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಹರಿಓಂ ಸೇವಾ ಸಂಸ್ಥೆಯ ಆನಂದ್ ಕಣಚೂರು ತಿಳಿಸಿದ್ದಾರೆ.


ಅಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು. ತಾಲೂಕಿನಲ್ಲಿ ನಿವೃತ್ತಿ ಹೊಂದಿದ ಎಲ್ಲಾ ಯೋಧರು ಹಾಗೂ ಯೋಧರ ಕುಟುಂಬಸ್ಥರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X