ರೈಲಿಗೆ ಸಿಲುಕಿ ವ್ಯಕ್ತಿ ಸಾವು
ಶಿವಮೊಗ್ಗ, ಫೆ.24: ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿಯೋರ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹೊರವಲಯದ ವಿದ್ಯಾನಗರ ಬಡಾವಣೆಯಲ್ಲಿ ಶುಕ್ರವಾರ ಬೆಳಗ್ಗೆ ವರದಿಯಾಗಿದೆ. ನಗರದ ಗಾಂಧಿಬಝಾರ್ ರಸ್ತೆಯ ನಿವಾಸಿ, ಟೈಲರಿಂಗ್ ಕೆಲಸ ಮಾಡುತ್ತಿದ್ದ ಗೋಪಾಲಕೃಷ್ಣ (37) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಯಾವ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನುವುದು ಖಚಿತವಾಗಿಲ್ಲ. ರೈಲುಹಳಿಯ ಮೇಲೆ ಶವ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ಶೇಖರ್ ಮತ್ತವರ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣದಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story