ಹಣಕಾಸು ವಿಚಾರದ ವೈಷಮ್ಯ: ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ತುಮಕೂರು, ಎ.23: ಹಣಕಾಸು ವಿಚಾರದ ವೈಷಮ್ಯದ ಹಿನ್ನೆಲೆಯಲ್ಲಿ ಕಾರೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ತುಮಕೂರಿನ ಜಯನಗರದಲ್ಲಿ ನಡೆದಿದೆ.
ಹಣಕಾಸು ವಿಚಾರದ ವೈಷಮ್ಯದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ರಾಜು ಎಂಬವರ ಕಾರನ್ನು 10 ದಿವಸಗಳ ಹಿಂದೆ ಜಖಂಗೊಳಿಸಿದ್ದ ದುಷ್ಕರ್ಮಿಗಳು ನಿನ್ನೆ ತಡರಾತ್ರಿ ಕಾರಿಗೆ ಬೆಂಕಿಹಚ್ಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಚಿ.ನಾ.ಹಳ್ಳಿಮುನಿಯಪ್ಪ ಮತ್ತು ಸಹಚರರ ವಿರುದ್ದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story