ಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಢಿಕ್ಕಿ
ಬೆಂಗಳೂರು, ಎ.24: ಮುಖ್ಯ ಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿಯಾಗಿದ್ದು, ಪೈಲೆಟ್ ಸಮಯಪ್ರಜ್ಞೆಯಿಂದಾಗಿ ಭಾರೀ ದುರಂತ ತಪ್ಪಿದೆ.
ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರು ಶ್ರವಣಬೆಳಗೋಳಕ್ಕೆ ಗೃಹಸಚಿವ ಡಾ.ಜಿ.ಪರಮೇಶ್ವರ ಅವರ ಜೊತೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಸಿಎಂ ಸಿದ್ದರಾಮಯ್ಯ ಅವರಿದ್ದ ಹೆಲಿಕಾಪ್ಟರ್ ಎಚ್ಎಎಲ್ ಏರ್ ಪೋರ್ಟ್ನಿಂದ ಟೇಕ್ಆಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಹದ್ದು ಬಡಿದ ತಕ್ಷಣ ಪೈಲೆಟ್ ಹೆಲಿಕಾಪ್ಟರ್ ನ್ನು ಕೆಳಗೆ ಇಳಿಸಿದ್ದಾರೆ. ಹೆಲಿಕಾಪ್ಟರ್ ಗೂ ಯಾವುದೇ ಹಾನಿಯಾಗಿಲ್ಲ. ಹೆಲಿಕಾಪ್ಟರ್ ಮರು ಹಾರಾಟಕ್ಕೆ ತಾಂತ್ರಿಕ ಅಂಶಗಳನ್ನು ಪರಿಶೀಲಿಸಿ ಗ್ರೀನ್ ಸಿಗ್ನಲ್ ದೊರೆತ ಬಳಿಕ ಇದೀಗ ಅದೇ ಹೆಲಿಕಾಪ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಯಾಣ ಮುಂದುವರಿಸಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ.
Next Story