ಟ್ರ್ಯಾಕ್ಟರ್ ಪಲ್ಟಿ: 20 ಜನರಿಗೆ ಗಾಯ
ಶಿವಮೊಗ್ಗ, ಎ.25: ಚಾಲಕನ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರೊಂದು ಪಲ್ಟಿಯಾದ ಪರಿಣಾಮ ಸುಮಾರು 20 ಮಂದಿ ಗಾಯಗೊಂಡಿರುವ ಘಟನೆ ಹಣಗೆರೆಕಟ್ಟೆಯ ಬಳಿ ಮಂಗಳವಾರ ನಡೆದಿದೆ.
ಕುಂಸಿ ಕಡೆಯಿಂದ ಹಣಗೆರೆ ದೇವಸ್ಥಾನಕ್ಕೆ ಟ್ರ್ಯಾಕ್ಟರ್ ತೆರಳುತ್ತಿತ್ತು. ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆ, ವೇಗದ ಚಾಲನೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಗಾಯಾಳುಗಳನ್ನು ತಕ್ಷಣವೇ ಶಿವಮೊಗ್ಗದ ಸರಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ಗುರುರಾಜ್, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story