ರೈಲ್ವೆ ನಿಲ್ದಾಣದಲ್ಲಿ ಬಾಂಬ್: ಕಿಡಿಗೇಡಿಯಿಂದ ಹುಸಿ ಕರೆ
ಮಂಡ್ಯ, ಎ.25: ನಗರದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಅನಾಮಧೇಯ ಕರೆಯೊಂದು ಬಂದ ಹಿನ್ನೆಲೆಯಲ್ಲಿ ನಗರದ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಅನಾಮಧೇಯ ವ್ಯಕ್ತಿಯೊಬ್ಬ ಮೂರು ಗಂಟೆ ಸುಮಾರಿಗೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆಯೊಂದನ್ನು ಮಾಡಿ, ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದ ಎನ್ನಲಾಗಿದೆ.
ಕೂಡಲೇ ಕಾರ್ಯಪ್ರವೃತ್ತರಾದ ಅಪರ ಪೊಲೀಸ್ ವರಿಷ್ಠಾಧಿಕಾರಿ ಸವಿತಾ, ಇತರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಶ್ವಾನದಳದವರು ಹಾಗೂ ಬಾಂಬ್ ನಿಷ್ಕ್ರಿಯ ತಜ್ಞರ ಜತೆ ರೈಲ್ವೆ ನಿಲ್ದಾಣಕ್ಕೆ ದೌಡಾಯಿಸಿದರು. ರೈಲ್ವೆ ನಿಲ್ದಾಣದ ಕಚೇರಿ, ಕೊಠಡಿ, ಪ್ರಯಾಣಿಕರ ಬ್ಯಾಗ್ಗಳನ್ನು ಪರಿಶೀಲನೆ ನಡೆಸಲಾಯಿತು. ಆದರೆ, ಎಲ್ಲಿಯೂ ಬಾಂಬ್ ಇಟ್ಟಿರುವ ಸುಳಿವು ಸಿಗಲಿಲ್ಲ. ಕೊನೆಗೆ ಇದು ಹುಸಿಬಾಂಬ್ ಕರೆಯೆಂದು ಸ್ಪಷ್ಟವಾಯಿತು.
Next Story