ಲಾರಿ ಢಿಕ್ಕಿ: ದ್ವಿಚಕ್ರ ಸವಾರ ಮೃತ್ಯು
ಕಡೂರು, ಮೇ.6: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಅಜ್ಜಂಪುರ ಮಾರ್ಗದಲ್ಲಿ ನಡೆದಿದೆ.
ಮೃತರನ್ನು ಸಿದ್ದಲಿಂಗಯ್ಯ ಮೂರ್ತಯ್ಯ(32) ಎಂದು ಗುರುತಿಸಲಾಗಿದೆ. ಮೂರ್ತಯ್ಯ ಮಲ್ಲಿಕಾರ್ಜುನಯ್ಯ ಎಂಬವರ ಜೊತೆ ಬೆಳಗುಂಬ ಗ್ರಾಮದಿಂದ ಅಜ್ಜಂಪುರದತ್ತ ತೆರಳುತ್ತಿದ್ದರು. ಈ ಸಮಯದಲ್ಲಿ ಎದುರಿನಿಂದ ಬಂದ ಲಾರಿಯೊಂದು ಬೈಕ್ಗೆ ಢಿಕ್ಕಿ ಹೊಡೆಯಿತು. ಲಾರಿಯ ಚಕ್ರಗಳು ಮೂರ್ತಯ್ಯ ದೇಹದ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೂರ್ತಯ್ಯರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story