‘ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧತೆ’
ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು, ಜ.4: ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಅನುಸರಿಸಬೇಕಾದ ರಣತಂತ್ರಗಳು ಹಾಗೂ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿತು.
ಸೋಮವಾರ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸರಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಪ್ರಚಾರ ತಂತ್ರವನ್ನು ರೂಪಿಸಲು ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಸಿ.ಟಿ.ರವಿ ಸೇರಿದಂತೆ ಮಾಜಿ ಶಾಸಕರು, ಮಾಜಿ ಸಚಿವರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Next Story