ಲಕ್ಷಾಂತರ ವೌಲ್ಯದ ನಗ-ನಗದು ಕಳ್ಳತನ
ಸಾಗರ, ಮೇ 28: ಮನೆಯ ವೆಂಟಿಲೇಟರ್ಗೆ ಅಳವಡಿಸಿದ್ದ ಕಬ್ಬಿಣದ ರಾಡ್ ಮುರಿದು ಒಳ ನುಗ್ಗಿದ ಕಳ್ಳರು ಸುಮಾರು 2.50 ಲಕ್ಷ ರೂ. ಮೌಲ್ಯದ ನಗದು ಹಾಗೂ ಬಂಗಾರದ ಆಭರಣವನ್ನು ದೋಚಿರುವುದಕ್ಕೆ ಸಂಬಂಧಪಟ್ಟಂತೆ ಶನಿವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕೆ.ಟಿ. ಬಡಾವಣೆಯ ಅಣಲೆಕೊಪ್ಪ ವಾಸಿ ಅನಿಲ್ ಎಂಬವರು ಮೂರು ದಿನಗಳಿಂದ ಮನೆಯಲ್ಲಿ ಇಲ್ಲದೆ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಹಿಂಭಾಗದ ವೆಂಟಿಲೇಟರ್ಗೆ ಅಳವಡಿಸಿದ್ದ ಕಬ್ಬಿಣದ ರಾಡನ್ನು ಆಯುಧದಿಂದ ತುಂಡು ಮಾಡಿ ಮನೆಯೊಳಗೆ ನುಗ್ಗಿದ್ದಾರೆ ಎನ್ನಲಾಗಿದೆ.
ಮನೆಯ ಬೆಡ್ರೂಮಿನಲ್ಲಿದ್ದ 30ಸಾವಿರ ರೂ. ನಗದು, 127 ಗ್ರಾಂ ಚಿನ್ನಾಭರಣ ಹಾಗೂ 3 ಬ್ರಾಂಡೆಡ್ವಾಚ್ ಸೇರಿದಂತೆ ಸುಮಾರು 2.55 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಅನಿಲ್ ಮತ್ತು ಕುಟುಂಬ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
Next Story