ಅಪರಿಚಿತ ವಾಹನ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು, ಇಬ್ಬರಿಗೆ ಗಾಯ
ಮಂಡ್ಯ, ಜೂ.21: ಸ್ಕೂಟರ್ಗೆ ಅಪರಿಚಿತ ವಾಹನ ಢಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು- ಮೈಸೂರು ಹೆದ್ದಾರಿಯ ಇಂಡುವಾಳು ಗ್ರಾಮದ ಬಳಿ ಬುಧವಾರ ನಡೆದಿದೆ.
ನಗರದ ಗುತ್ತಲು ಬಡಾವಣೆಯ ನಿವಾಸಿ ಮುಹಮ್ಮದ್ ಜುಲ್ಫಿಕರ್ (21) ಮೃತರು ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಮುಹಮ್ಮದ್ ಫಾಝಿಲ್ ಮತ್ತು ಮುಹಮ್ಮದ್ ನೂವನ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಸೇರಿಲಾಗಿದೆ.
ಕಾರ್ಯನಿಮಿತ್ತ ಮೂವರು ಯುವಕರು ಸ್ಕೂಟರ್ನಲ್ಲಿ ಮೈಸೂರು ಕಡೆಗೆ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story