ನಕ್ಸಲ್ ಹೆಸರಿನ ಬ್ಯಾನರ್ ಪತ್ತೆ
ಚಿಕ್ಕಮಗಳೂರು, ಜು.25: ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದಲ್ಲಿ ನಡೆದಿದೆ ನಕ್ಸಲ್ ಹೆಸರಿನ ಬ್ಯಾನರ್ ಹಾಕಿರುವುದು ಪತ್ತೆಯಾಗಿದೆ.
ಈ ಬ್ಯಾನರ್ನಲ್ಲಿ ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ವಿರೋಧಿಸಿ ಬ್ಯಾನರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವುದು ಕಂಡು ಬಂದಿದೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿಲ್ಲಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೇ ನೋಟು ಬ್ಯಾನ್ ಹಾಗೂ ಜಿಎಸ್ಟಿ ಮೂಲಕ ಜನರನ್ನ ಸಂಕಷ್ಟಕ್ಕೆ ಸಿಲುಕಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಪಿಐ / ಮಾವೋವಾದಿ ಹೆಸರಿನಲ್ಲಿ ಕಾಣಿಸಿಕೊಂಡಿರುವ ಬ್ಯಾನರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಹತ್ತಕ್ಕೂ ಹೆಚ್ಚು ಬ್ಯಾನರ್ಗಳನ್ನು ಕಳೆದ ರಾತ್ರಿ ಕಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಎನ್.ಎನ್.ಎಫ್ ತಂಡ ಹಾಗೂ ಶೃಂಗೇರಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story