Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧ್ಯಯನ, ಸಂಶೋಧನೆಗೆ ಹೊಸ ಚರಿತ್ರೆಯನ್ನು...

ಅಧ್ಯಯನ, ಸಂಶೋಧನೆಗೆ ಹೊಸ ಚರಿತ್ರೆಯನ್ನು ತೆರೆದುಕೊಳ್ಳಲಿದೆ: ಶ್ರೀಪಾದ ಬಿಚ್ಚುಗತ್ತಿ

ವಾರ್ತಾಭಾರತಿವಾರ್ತಾಭಾರತಿ2 Aug 2017 8:21 PM IST
share
ಅಧ್ಯಯನ, ಸಂಶೋಧನೆಗೆ ಹೊಸ ಚರಿತ್ರೆಯನ್ನು ತೆರೆದುಕೊಳ್ಳಲಿದೆ: ಶ್ರೀಪಾದ ಬಿಚ್ಚುಗತ್ತಿ

ಶಿಕಾರಿಪುರ, ಆ.2: ಇತಿಹಾಸ ಎಂದಿಗೂ ನಿಂತ ನೀರಲ್ಲ. ಅಧ್ಯಯನ ಸಂಶೋಧನೆಗೆ ಹೊಸ ಹೊಸ ಚರಿತ್ರೆಯನ್ನು ತೆರೆದುಕೊಳ್ಳಲಿದೆ ಎಂದು ಇತಿಹಾಸಕಾರ, ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ ಅಭಿಪ್ರಾಯಪಟ್ಟರು.

ಬುಧವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಲ್ಲಮ ಸಭಾಂಗಣದಲ್ಲಿ ಕದಂಬ ವೇದಿಕೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ಶಿಕಾರಿಪುರ ತಾಲೂಕು ಇತಿಹಾಸದ ಪುಟದಲ್ಲಿ ಬಹು ಮಹತ್ವದ ಸ್ಥಾನವನ್ನು ಹೊಂದಿದ್ದು, ತಾಲೂಕಿನ ಪ್ರತಿ ಹಳ್ಳಿ ಹಳ್ಳಿ ತನ್ನದೇ ಆದ ಮಹತ್ವ ಹೊಂದಿದೆ ಎಂದ ಅವರು, ಹಲ್ಮಿಡಿ ಶಾಸನ ಕನ್ನಡದ ಪ್ರಥಮ ಶಾಸನ ಎಂದು ಬಾವಿಸಲಾಗಿದ್ದು, ಇದೀಗ ತಾಲೂಕಿನ ತಾಳಗುಂದದಲ್ಲಿ ಖ್ಯಾತ ಇತಿಹಾಸಕಾರರು ನಡೆಸಿದ ಉತ್ಖನನದ ವೇಳೆ ದೊರೆತ ಶಾಸನದ ಲಿಪಿಗಳು ಹಲ್ಮಿಡಿಗಿಂತ ಪುರಾತನ ಎಂದು ಸಾಬೀತಾಗಿದ್ದು, ಈ ದಿಸೆಯಲ್ಲಿ ತಾಳಗುಂದದ ಶಾಸನವನ್ನು ಕನ್ನಡದ ಅತ್ಯಂತ ಪುರಾತನ ಶಾಸನವಾಗಿ ಘೋಷಿಸಲು ಪುರಾತತ್ವ ಇಲಾಖೆಗೆ ಶಿಫಾರಸು ಕಳುಹಿಸಲಾಗಿದೆ ಎಂದು ತಿಳಿಸಿದರು.

ನಾಡಿನ ಇತಿಹಾಸದಲ್ಲಿ ನಿತ್ಯ ಅಧ್ಯಯನ ಸಂಶೋಧನೆಯಿಂದ ಕ್ರಾಂತಿಕಾರಕ ಬದಲಾವಣೆ ಗೋಚರವಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಪ್ರಶ್ನಿಸುವ ಮನೋಭಾವ ಕುತೂಹಲದಿಂದ ಹೊಸ ತರ್ಕಕ್ಕೆ ನಾಂದಿಯಾಗಲಿದೆ. ತಪ್ಪಿದಲ್ಲಿ ವಿದ್ಯಾರ್ಥಿಗಳು ಜೀವಂತ ಶವಕ್ಕೆ ಸಮ ಎಂದು ಅಭಿಪ್ರಾಯಪಟ್ಟ ಅವರು, ತಾರ್ಕಿಕ ಚಿಂತನೆ ವಿಚಾರಗಳಿಂದ ಇತಿಹಾಸದ ಪುಟಗಳು ತೆರೆದುಕೊಳ್ಳಲಿದ್ದು, ತಾಲೂಕಿನ ಬನ್ನೂರು, ಈಸೂರಿನಲ್ಲಿ ಗಜಪೃಷ್ಠಾಕೃತಿಯ ಶಿಲೆಗಳು ದೊರೆತಿದೆ. ಈ ದಿಸೆಯಲ್ಲಿ ಭೌದ್ದಾರಾಧನೆಯ ಪ್ರಾದೇಶಿಕ ಇತಿಹಾಸದ ಬಗ್ಗೆ ಬೆಳಕು ಕಂಡುಬಂದಿದ್ದು ಭೌದ್ದಧರ್ಮ ಆಚರಣೆಯಲ್ಲಿರುವ ಬಗ್ಗೆ ದೃಡಪಟ್ಟಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ, ಉಪನ್ಯಾಸಕ ಡಾ.ಉಮೇಶ್ ಕುಂಸಿ ಮಾತನಾಡಿ, ಶಿಕಾರಿಪುರ ಅತ್ಯಂತ ವೈಭವಯುತ ಸಾಂಸ್ಕೃತಿಕ, ಐತಿಹಾಸಿಕ ತಾಲೂಕು ಎಂದು ಪ್ರಸಿದ್ದವಾಗಿದ್ದು, ತಕ್ಷಶಿಲೆ ನಂತರದಲ್ಲಿ ದೇಶದ 2 ನೇ ವಿಶ್ವವಿದ್ಯಾಲಯ ತಾಳಗುಂದ ಶೈಕ್ಷಣಿಕ ಕೇಂದ್ರವಾಗಿ ಇತಿಹಾಸದಲ್ಲಿ ಗುರುತಿಸಿಕೊಂಡಿದೆ ಎಂದ ಅವರು, ತಾಲೂಕಿನ ಪ್ರತಿ ಕೆರೆ, ದೇವಾಲಯಗಳು, ಇತಿಹಾಸ ಚರಿತ್ರೆಗೆ ಸಾಕ್ಷಿಯಾಗಿದೆ. ಏಷ್ಯಾ ಖಂಡದಲ್ಲಿ ಅತಿ ಹೆಚ್ಚು ಕೆರೆ ಹೊಂದಿದ ತಾಲೂಕಿನ ಹಲವು ಕೆರೆಗಳು ಒತ್ತವರಿಯಾಗಿ ವಿಕೋಪ ಉಂಟಾಗಿ ಮನುಷ್ಯನ ಜತೆಗೆ ಚರಿತ್ರೆ ನಾಶಕ್ಕೆ ಕಾರಣವಾಗುತ್ತಿದೆ. ಇದರೊಂದಿಗೆ ಸರ್ಕಾರದ ಕೆರೆ ಡಿನೋಟಿಫೈ ನಿರ್ಧಾರ ಇತಿಹಾಸದ ನಾಶದ ಆತಂಕವನ್ನು ಒಡ್ಡಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಜಿ ಆರ್ ಹೆಗಡೆ ವಹಿಸಿ ಮಾತನಾಡಿದರು. ಪ್ರೊ. ಡಿ ಕೆ ಮಂಜಪ್ಪ ಪ್ರಾಸ್ಥಾವಿಕವಾಗಿ ಮಾತನಾಡಿದರು. ನ್ಯಾಕ್ ಸಂಚಾಲಕರಾದ ಡಾ.ಶೈಲಜಾ ಹೊಸಳ್ಳೇರ್, ಯಶೋಧಾ,ಈಶ್ವರ ಮತ್ತಿತರರು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X