ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶ: ಓರ್ವ ಮೃತ್ಯು
ಸಕಲೇಶಪುರ, ಆ.7: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಕ್ಕೊಳಗಾಗಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ಕಾಮನಹಳ್ಳಿಯಲ್ಲಿ ಇಂದು ನಡೆದಿದೆ.
ಕಸಬಾ ಹೋಬಳಿ ನಡಹಳ್ಳಿ ಗ್ರಾಮದ ತಮಯ್ಯ(58) ಮೃತಪಟ್ಟವರಾಗಿದ್ದಾರೆ. ಇವರು ಕಾಮನಹಳ್ಳಿ ಗ್ರಾಮದ ವಿರೇಶ್ ಎಂಬವರ ತೋಟದಲ್ಲಿ ಮರದ ಕೊಂಬೆ ಕಡಿಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
Next Story