Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಷ್ಠ ಸಾಹಿತ್ಯಕ್ಕೆ ಇರುವ ಮಾನ್ಯತೆ,...

ಶಿಷ್ಠ ಸಾಹಿತ್ಯಕ್ಕೆ ಇರುವ ಮಾನ್ಯತೆ, ಜಾನಪದಕ್ಕೆ ದೊರೆಯಬೇಕು: ಡಾ. ಎಸ್.ಬಾಲಾಜಿ

ವಾರ್ತಾಭಾರತಿವಾರ್ತಾಭಾರತಿ16 Aug 2017 7:10 PM IST
share
ಶಿಷ್ಠ ಸಾಹಿತ್ಯಕ್ಕೆ ಇರುವ ಮಾನ್ಯತೆ, ಜಾನಪದಕ್ಕೆ ದೊರೆಯಬೇಕು: ಡಾ. ಎಸ್.ಬಾಲಾಜಿ

ಚಿಕ್ಕಮಗಳೂರು ಆ.16: ಕವಿಗಳಿಗೆ ನೀಡಿರುವ ಸ್ಥಾನವನ್ನು ಜನಪದ ಕಲಾವಿದರಿಗೆ ನೀಡುತ್ತಿಲ್ಲ. ಉನ್ನತ ಮಟ್ಟದ ಪ್ರಶಸ್ತಿಗಳನ್ನು ನೀಡುವಾಗ ಜನಪದ ಕಲಾವಿದರನ್ನು ಸಹ ಪರಿಗಣಿಸಬೇಕಾಗಿದೆ ಎಂದು ಜನಪದ ಪರಿಷತ್ ರಾಜ್ಯ ಅಧ್ಯಕ್ಷರಾದ ಡಾ. ಎಸ್. ಬಾಲಾಜಿ ಅವರು ತಿಳಿಸಿದರು.

 ಅವರು ತಾಲ್ಲೂಕು ಜಾನಪದ ಪರಿಷತ್ ಉದ್ಘಾಟನೆಯ ಸಂದರ್ಭದಲ್ಲಿ ಬೀಕನಹಳ್ಳಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಏರ್ಪಡಿಸಿದ್ದ ಕಲಾವಿದ ಬೀಕನಹಳ್ಳಿ ಬಸವರಾಜ್ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಷ್ಠ ಸಾಹಿತ್ಯಕ್ಕೆ ಇರುವ ಮಾನ್ಯತೆ, ಜಾನಪದಕ್ಕೆ ದೊರೆಯಬೇಕು, ಕನ್ನಡ ಜನಪದ ಸಾಹಿತ್ಯಕ್ಕೆ ಪಠ್ಯಕ್ರಮದಲ್ಲಿ ಹೆಚ್ಚಿನ ಸ್ಥಾನ ನೀಡಬೇಕು, ಪ್ರಾಥಮಿಕ ಹಂತದಿಂದಲೂ ಅಳವಡಿಸುವುದರಿಂದ ಮಕ್ಕಳು ಜನಪದ ಸಾಹಿತ್ಯದೊಂದಿಗೆ ಬೆಳೆಯಲು ಅನುಕೂಲವಾಗುವುದು ಎಂದು ನುಡಿದರು.

  ಸಾಕಷ್ಟು ಜಾನಪದ ನಾಟಕಗಳನ್ನು ನಿರ್ದೇಶಿಸುತ್ತಾ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದ ಬಸವರಾಜ್ ಅವರ ಸ್ಮರಣಾರ್ಥ ಕಾರ್ಯಕ್ರಮ ನಡೆಸುತ್ತಿರುವುದು ಅರ್ಥಪೂರ್ಣ. ಬಸವರಾಜ್ ಅವರಂತಹ ನಿಸ್ವಾರ್ಥ ಕಲಾವಿದರನ್ನು ಸ್ಮರಿಸುತ್ತಾ ನಾವು ಇನ್ನು ಅನೇಕ ಕಾರ್ಯಕ್ರವಗಳನ್ನು ಮುಂದೆಯು ನಡೆಸುತ್ತೇವೆ.  ಜನಪದ ಕಲೆಗಳು ಮಕ್ಕಳಿಗೆ ತಲುಪಬೇಕು, ಇದಕ್ಕಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಮಕ್ಕಳಿಗಾಗಿ ಜನಪದ ಸಮ್ಮೇಳನಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.

  ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ತಮ್ಮ ತಂದೆಯೊಂದಿಗೆ ಬಸವರಾಜ್ ಅವರ ಒಡನಾಟವನ್ನು ಸ್ಮರಿಸಿಕೊಂಡರು. ಅಜ್ನಾತ ಕವಿಗಳ ಅಮರ ಕಾವ್ಯ ಎಂದರೆ ಜನಪದ ಕಾವ್ಯ, ಆದರೆ ನಾವು ಇದನ್ನು ದಾಖಲೆ ಮಾಡುವ ಕೆಲಸ ಮಾಡುತ್ತಿದ್ದೇವೆ ಇದರಿಂದ ಮುಂದಿನ ಜನಾಂಗಕ್ಕೆ ಇವು ಲಬ್ಯವಾಗುವ ಸಾಧ್ಯತೆ ಇರುತ್ತದೆ ಎಂದರು.

  ಜಾನಪದ ಕಲಾವಿದರಾದ ಬಿಸಲೇಹಳ್ಳಿ ಸೋಮಶೇಖರ್ ಅಧ್ಯಕ್ಷತೆ ವಹಿಸಿ ಮಾತನಾಡಿದÀರು.

  ಕಾರ್ಯಕ್ರಮದಲ್ಲಿ ಶ್ರೀಮತಿ ಪದ್ಮಾ ತಿಮ್ಮೇಗೌಡ, ಮುಖ್ಯಶಿಕ್ಷಕಿ ಶ್ರೀಮತಿ ಆರ್.ಸಿ.ವಿಮಲಾಕ್ಷಿ, ಶ್ರೀಮತಿ ಭಾರತೀ ಶಿವರುದ್ರಪ್ಪ, ನಿವೃತ್ತ ಎಎಸ್‍ಐ ವಿಶ್ವನಾಥ್, ಲೇಖಕಿ ಶಾಂತಿ ಸರೋಜಿನಿ, ನಳಿನ ಡಿ, ನಿವೃತ್ತ ಶಿಕ್ಷಕ ಬೀರೇಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X