ನಾಳೆ ಸಿದ್ದು ಸಚಿವ ಸಂಪುಟ ವಿಸ್ತರಣೆ: ಷಡಕ್ಷರಿಗೆ ಕೈತಪ್ಪಿದ ಸಚಿವ ಸ್ಥಾನ
ಗೀತಾ ಮಹದೇವ ಪ್ರಸಾದ್ಗೆ ಒಲಿದ ಸಚಿವಸ್ಥಾನ
ಬೆಂಗಳೂರು, ಆ.31: ರಾಜ್ಯ ಸಚಿವ ಸಂಪುಟದ ವಿಸ್ತರಣೆಗೆ ಕೊನೆಗೂ ಕಾಲ ಕೂಡಿಬಂದಿದ್ದು, ಶುಕ್ರವಾರ ಸಂಜೆ 5 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಮೂವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕೊನೆಯ ಕ್ಷಣದಲ್ಲಿ ಕೆ.ಷಡಕ್ಷರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ದಿವಂಗತ ಎಚ್ಎಸ್ ಮಹದೇವ ಪ್ರಸಾದ್ರ ಪತ್ನಿ ಗೀತಾಗೆ ಸಚಿವಸ್ಥಾನ ಒಲಿದುಬಂದಿದೆ.
ಕುರುಬ ಕೋಟಾದಲ್ಲಿ ಎಚ್.ಎಂ. ರೇವಣ್ಣ, ದಲಿತ ಕೋಟಾದಲ್ಲಿ ಆರ್.ಬಿ. ತಿಮ್ಮಾಪುರ ಹಾಗೂ ಲಿಂಗಾಯತ ಕೋಟಾದಲ್ಲಿ ಗೀತಾ ಮಹದೇವಪ್ರಸಾದ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ಸಿಎಂ ಕಚೇರಿ ರಾಜಭವನಕ್ಕೆ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ.
Next Story