ಮನೆ ಬೀಗ ಮುರಿದು ನಗನಾಣ್ಯ ಕಳವು
ಶಿವಮೊಗ್ಗ, ಸೆ. 25: ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು, ಸಾವಿರಾರು ರೂ. ಮೌಲ್ಯದ ನಗನಾಣ್ಯ ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯಲ್ಲಿ ವರದಿಯಾಗಿದೆ.
ಸಾಗರ ರಸ್ತೆಯ ವಿನಾಯಕ ನಗರದ ನಿವಾಸಿ ರೇಖಾ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಸುಮಾರು 50 ಸಾವಿರ ರೂ. ಮೌಲ್ಯದ ಮಾಂಗಲ್ಯ ಸರ ಹಾಗೂ ನಗದನ್ನು ಕಳ್ಳರು ಅಪಹರಿಸಿದ್ದಾರೆ.
ಈ ಸಂಬಂಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story