ಅಂಧರ ಕ್ರಿಕೆಟ್ ವಿಶ್ವಕಪ್: ಭಾರತಕ್ಕೆ ಸತತ ಜಯ
ದುಬೈ, ಜ.13: ನಾಯಕ ಅಜಯ್ ರೆಡ್ಡಿಯ ಅಲ್ರೌಂಡ್ ಆಟದ ನೆರವಿನಿಂದ ಭಾರತ ತಂಡ 5ನೇ ಆವೃತ್ತಿಯ ಅಂಧರ ಕ್ರಿಕೆಟ್ ವಿಶ್ವಕಪ್ನಲ್ಲಿ ಬಾಂಗ್ಲಾದೇಶದ ವಿರುದ್ಧ 10 ವಿಕೆಟ್ಗಳಿಂದ ಜಯ ಸಾಧಿಸಿದೆ. ಶನಿವಾರ ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶ ನಿಗದಿತ 40 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 226 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 18.4 ಓವರ್ಗಳಲ್ಲಿ ಗೆಲುವಿನ ಗುರಿ ತಲುಪಿತು. ಈ ಮೂಲಕ ಟೂರ್ನಿಯಲ್ಲಿ ಸತತ 2ನೇ ಜಯ ದಾಖಲಿಸಿತು.
ರೆಡ್ಡಿ 60 ಎಸೆತಗಳಲ್ಲಿ 14 ಬೌಂಡರಿ ನೆರವಿನಿಂದ ಔಟಾಗದೆ 101 ರನ್ ಸಿಡಿಸಿದರು. ಸುನೀಲ್ ರಮೇಶ್ 57 ಎಸೆತಗಳಲ್ಲಿ 17 ಬೌಂಡರಿ ಸಹಾಯದಿಂದ ಔಟಾಗದೆ 105 ರನ್ ಗಳಿಸಿದರು. ಬೌಲಿಂಗ್ನಲ್ಲೂ ಮಿಂಚಿದ್ದ ರೆಡ್ಡಿ 8 ಓವರ್ಗಳಲ್ಲಿ 4 ವಿಕೆಟ್ಗಳನ್ನು ಕಬಳಿಸಿದ್ದಾರೆ.
Next Story