ಮಾನವೀಯತೆ ಮೆರೆದ ಕೌರ್
ಗಯಾನ, ನ.12: ಭಾರತದ ಟ್ವೆಂಟಿ-20 ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ಮಾನವೀಯತೆ ಮೆರೆಯುವ ಮೂಲಕ ಎಲ್ಲರ ಹೃದಯ ಗೆದ್ದಿದ್ದಾರೆ.
ಭಾರತ-ಪಾಕ್ ನಡುವೆ ರವಿವಾರ ಪಂದ್ಯ ಆರಂಭಕ್ಕೆ ಮೊದಲು ಉಭಯ ದೇಶಗಳ ರಾಷ್ಟ್ರಗೀತೆ ಮೊಳಗಿಸಲಾಯಿತು. ರಾಷ್ಟ್ರಗೀತೆ ಮೊಳಗಿದ ಬಳಿಕ ಭಾರತದ ಆಟಗಾರ್ತಿ ಕೌರ್ ಬಳಿ ಬಂದ ಪುಟಾಣಿ ಬಾಲಕಿಯೊಬ್ಬಳು ತನಗೆ ನಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದಳು. ಆಗ ಕೌರ್ ತನ್ನ ತೋಳಿನಿಂದ ಬಾಲಕಿಯನ್ನು ಎತ್ತಿಕೊಂಡು ಹೋಗಿ ಅಧಿಕಾರಿಗಳ ಕೈಗೆ ಒಪ್ಪಿಸಿದರು. ಮೈದಾನದಲ್ಲಿ ಬಾಲಕಿಯನ್ನು ಕೌರ್ ಎತ್ತಿಕೊಂಡು ಹೋಗುವ ವಿಡಿಯೋ ವೈರಲ್ ಆಗಿದೆ. ಕೌರ್ ಮಾನವೀಯತೆಗೆ ಶ್ಲಾಘನೆ ವ್ಯಕ್ತವಾಗಿದೆ.
Next Story