ಪೋತ್ಸಾಹ ಧನ ಅರ್ಜಿ ಆಹ್ವಾನ
ಮಂಗಳೂರು, ಸೆ.2: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ರಾಜ್ಯಮಟ್ಟದ ಯುವಜನಮೇಳ ಹಾಗೂ ರಾಜ್ಯ ಮಟ್ಟ, ರಾಷ್ಟ್ರ ಮಟ್ಟದ ಯುವ ಜನೋತ್ಸವದಲ್ಲಿ ಕಾರ್ಯಕ್ರಮಗಳಲ್ಲಿ ವೈಯಕ್ತಿಕ, ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ವಿಜೇತರಾದ ಯುವಜನರಿಗೆ ಹಾಗೂ ಯುವಕ, ಯುವತಿ ಸಂಘ ಸಂಸ್ಥೆಗಳಿಗೆ ಪೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಯುವಜನ ಮೇಳ, ಯುವ ಜನೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ ವಿಜೇತರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಯುವಕ, ಯುವತಿಯರು ಯುವಕ, ಯುವತಿ ಸಂಘಗಳು ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನವಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story