ನಜೀಬ್ ಅಹ್ಮದ್ ನಾಪತ್ತೆ ಪ್ರಕರಣ :ಸಮಯವಕಾಶ ಕೋರಿದ ಸಿಬಿಐ
ಹೊಸದಿಲ್ಲಿ, ನ. 14: ತನಿಖೆ ಪೂರ್ಣಗೊಳಿಸಲು ಇನ್ನಷ್ಟು ಸಮಯಾವಕಾಶ ಬೇಕು ಎಂದು ಸಿಬಿಐ ಕೋರಿದ ಬಳಿಕ, ಜವಾಹಾರ ಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆ ಪ್ರಕರಣದ ವಿಚಾರಣೆಯ ಮುಂದಿನ ದಿನಾಂಕವನ್ನು ದಿಲ್ಲಿ ಉಚ್ಚ ನ್ಯಾಯಾಲಯ ಡಿಸೆಂಬರ್ 21ಕ್ಕೆ ನಿಗದಿಪಡಿಸಿದೆ.
ತನಿಖೆ ನಡೆಯುತ್ತಿದೆ ಹಾಗೂ ಅದು ಪೂರ್ಣಗೊಳ್ಳಲು ಇನ್ನಷ್ಟು ಸಮಯಾವಕಾಶದ ಅಗತ್ಯ ಇದೆ ಎಂದು ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ ಸ್ಥಿತಿಗತಿ ವರದಿಯಲ್ಲಿ ಹೇಳಿದೆ.
ಸಿಬಿಐ ಜೂನ್ನಲ್ಲಿ ಪ್ರಥಮ ಮಾಹಿತಿ ವರದಿ ದಾಖಲಿಸಿಕೊಂಡಿತ್ತು ಹಾಗೂ ತನಿಖೆ ಆರಂಭಿಸಿತ್ತು.
Next Story