ಶಾಲೆಗಳಲ್ಲಿ ಭಗವದ್ಗೀತೆ ಆಧರಿತ ಗಾಯನ ಸ್ಪರ್ಧೆ ನಡೆಸಿ: ಆದಿತ್ಯನಾಥ್ ಆದೇಶ
ಲಕ್ನೊ, ಡಿ.7: ರಾಜ್ಯದ ಎಲ್ಲಾ ಶಾಲೆಗಳಲ್ಲೂ ಭಗವದ್ಗೀತೆಯನ್ನು ಆಧಾರವಾಗಿಟ್ಟುಕೊಂಡು ಗಾಯನ ಸ್ಪರ್ಧೆ ಹಮ್ಮಿಕೊಳ್ಳಬೇಕೆಂದು ಆದಿತ್ಯನಾಥ್ ನೇತೃತ್ವದ ಸರಕಾರ ಆದೇಶಿಸಿದೆ. ಶಾಲಾ ಮಟ್ಟದಲ್ಲಿ ನಡೆಯುವ ಸ್ಪರ್ಧೆಯ ವಿಜೇತರು ಈ ತಿಂಗಳ ಅಂತ್ಯದಲ್ಲಿ ರಾಜ್ಯದ ರಾಜಧಾನಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸರಕಾರಿ, ಸರಕಾರಿ ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಈ ಸ್ಪರ್ಧೆ ನಡೆಯುವಂತೆ ಸೂಕ್ತ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಡಿ.11ರಿಂದ 15ರವರೆಗೆ ನಡೆಯಲಿರುವ ಪ್ರಥಮ ಹಂತದ ಸ್ಪರ್ಧೆಯಲ್ಲಿ ವಿಜೇತರಾದವರು ತಿಂಗಳಾಂತ್ಯದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story