ಭೀಕರ ರಸ್ತೆ ಅಪಘಾತ: ಐವರು ವಿದ್ಯಾರ್ಥಿಗಳು ಮೃತ್ಯು
29 ಮಂದಿಗೆ ಗಾಯ
ಮುಂಬೈ, ಫೆ.19: ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 29 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗಾಂವ್ ಗ್ರಾಮದ ಬಳಿ ಮುಂಬೈ- ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಸಾಂಗ್ಲಿಯಲ್ಲಿ ಆಯೋಜಿಸಲಾಗಿದ್ದ ಶಿವಾಜಿ ಮಹಾರಾಜರ ಜನ್ಮದಿನಾಚರಣೆ ಪ್ರಯುಕ್ತ 44 ವಿದ್ಯಾರ್ಥಿಗಳು ಟ್ರಕ್ ಒಂದರಲ್ಲಿ ‘ಶಿವಜ್ಯೋತಿ’ಯನ್ನು ಕೊಂಡೊಯ್ಯುತ್ತಿದ್ದಾಗ ದುರಂತ ಸಂಭವಿಸಿದೆ . ಟ್ರಕ್ಗೆ ಹಿಂಬದಿಯಿಂದ ಢಿಕ್ಕಿಯಾದ ವಾಹನ, ಬಳಿಕ ಟ್ರಕ್ನ ಬೆಂಗಾವಲಿನ ಎರಡು ಬೈಕ್ಗಳಿಗೂ ಢಿಕ್ಕಿಯಾಗಿದೆ. ಅಪಘಾತ ನಡೆದ ತಕ್ಷಣ 44 ವಿದ್ಯಾರ್ಥಿಗಳನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತರಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. 29 ಮಂದಿ ಗಂಭೀರ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story