2 ಜಿ ಹಗರಣ: ಆರೋಪಿಗಳಿಗೆ ಹೈಕೋರ್ಟ್ ನೋಟಿಸ್
ಹೊಸದಿಲ್ಲಿ,ಮಾ.21: ಕಳೆದ ಡಿಸೆಂಬರ್ ನಲ್ಲಿ 2 ಜಿ ಹಗರಣದಲ್ಲಿ ಖುಲಾಸೆಗೊಂಡಿದ್ದ ಎಲ್ಲ ಆರೋಪಿಗಳಿಗೆ ದಿಲ್ಲಿ ಹೈ ಕೋರ್ಟ್ ಇಂದು ನೋಟಿಸ್ ಜಾರಿ ಮಾಡಿದೆ.
ಮಾಜಿ ಕೇಂದ್ರ ದೂರ ಸಂಪರ್ಕ ಸಚಿವ ಎ.ರಾಜಾ , ಡಿಎಂಕೆ ಎಂಪಿ ಕನ್ನಿಮೋಳಿ ಸೇರಿದಂತೆ 19 ಆರೋಪಿಗಳನ್ನು ಕಳೆದ ಡಿ.21ರಂದು ಸಿಬಿಐ ವಿಶೇಷ ನ್ಯಾಯಾಲಯದ ಖುಲಾಸೆಗೊಳಿಸಿತ್ತು.
ಈ ತೀರ್ಪಿನ ವಿರುದ್ಧ ದಿಲ್ಲಿ ಜಾರಿ ನಿರ್ದೇಶನಾಲಯವು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಪ್ರಕರಣದ ಎಲ್ಲ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ ಮೇ 25ರಂದು ಪ್ರಕರಣದ ವಿಚಾರಣೆ ನಿಗದಿಪಡಿಸಿದೆ.
2 ಜಿ ಹಗರಣಕ್ಕೆ ಸಂಬಂಧಿಸಿದ 19 ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ವಿರುದ್ಧ ದಿಲ್ಲಿ ಹೈಕೋರ್ಟ್ ನಲ್ಲಿ ಜಾರಿ ನಿರ್ದೇಶನಾಲಯವು ಸೋಮವಾರ ಮೇಲ್ಮನವಿ ಸಲ್ಲಿಸಿತ್ತು.
Next Story