ಹಿಂಸಾರೂಪಕ್ಕೆ ತಿರುಗಿದ ಭಾರತ್ ಬಂದ್: ಓರ್ವ ಮೃತ್ಯು, ಹಲವರಿಗೆ ಗಾಯ
ಹೊಸದಿಲ್ಲಿ, ಎ.2: ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ತಿದ್ದುಪಡಿ ವಿರೋಧಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ‘ಭಾರತ್ ಬಂದ್’ ಹಿಂಸಾರೂಪಕ್ಕೆ ತಿರುಗಿದೆ. ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದ ಗಲಭೆಯಲ್ಲಿ ಓರ್ವ ಮೃತಪಟ್ಟಿದ್ದರೆ 12 ಮಂದಿ ಗಾಯಗೊಂಡಿದ್ದಾರೆ. ಇಲ್ಲಿ ಕರ್ಫ್ಯೂ ಹೇರಲಾಗಿದೆ.
ರಾಜಸ್ಥಾನದ ಅಜ್ಮೀರ್ ನಲ್ಲಿ ಇಬ್ಬರು ಪೊಲೀಸರು ಸೇರಿ ಮೂವರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಹಾಪುರ್, ಮೀರತ್ ನಲ್ಲಿ ಸಾವಿರಾರು ಪ್ರತಿಭಟನಾಕಾರರು ರಸ್ತೆಗಿಳಿದಿದ್ದಾರೆ.
Next Story