ತೀವ್ರಗೊಂಡ ಭಾರತ್ ಬಂದ್ ಪ್ರತಿಭಟನೆ: ನಾಲ್ವರು ಮೃತ್ಯು
ವಾಹನಗಳಿಗೆ ಬೆಂಕಿ
ಹೊಸದಿಲ್ಲಿ, ಎ.2: ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ತಿದ್ದುಪಡಿ ವಿರೋಧಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ‘ಭಾರತ್ ಬಂದ್’ ವಿವಿಧ ರಾಜ್ಯಗಳಲ್ಲಿ ಹಿಂಸಾ ರೂಪಕ್ಕೆ ತಿರುಗಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಹಿಸಾರ್-ಹೊಸದಿಲ್ಲಿ ಹಾಗು ಅಂಬಾಲ-ಹೊಸದಿಲ್ಲಿ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಮುಝಫ್ಫರ್ ನಗರದಲ್ಲಿ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಧ್ಯಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಮಧ್ಯಪ್ರದೇಶದ ಗ್ವಾಲಿಯರ್, ಭಿಂದ್, ಮೊರೆನಾ, ಸಾಗರ್, ಬಾಲಾಘಾಟ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಗುಂಪೊಂದು ಗುಂಡು ಹಾರಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದರೆ, ಹಲವರು ಗಾಯಗೊಂಡಿದ್ದಾರೆ.
Next Story