ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ವಿವಾದ: ಕೇರಳದಾದ್ಯಂತ ದಲಿತ ಸಂಘಟನೆಗಳ ಪ್ರತಿಭಟನೆ
ತಿರುವನಂತಪುರಂ, ಎ.9: ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೇರಳದಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಲವೆಡೆ ಬಂದ್ ಆಚರಿಸಲಾಗಿದೆ.
ತಂಪನೂರ್ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳ ಕಾರ್ಯಕರ್ತರು ಈ ದಾರಿಯಲ್ಲಿ ಬರುವ ವಾಹನಗಳನ್ನು ತಡೆದರು. ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶವನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಸುಪ್ರೀಂ ಕೋರ್ಟ್ ಆದೇಶವನ್ನು ವಿರೋಧಿಸಿ ಇತ್ತೀಚೆಗೆ ದಲಿತರು ಭಾರತ್ ಬಂದ್ ನಡೆಸಿದ್ದರು. ಪಂಜಾಬ್, ಒಡಿಶಾ, ಉತ್ತರ ಪ್ರದೇಶ ಹಾಗು ರಾಜಸ್ಥಾನದಲ್ಲಿ ನಡೆದ ಬಂದ್ ಹಿಂಸಾರೂಪಕ್ಕೆ ತಿರುಗಿತ್ತು. ಹಿಂಸಾಚಾರದಲ್ಲಿ ಸುಮಾರು 11 ಮಂದಿ ಮೃತಪಟ್ಟಿದ್ದರು.
Next Story