ಉತ್ತರ ಪ್ರದೇಶ: ಅಂಬೇಡ್ಕರ್ ಪ್ರತಿಮೆ ಮೇಲೆ ದಾಳಿ
ಲಕ್ನೋ, ಎ.18: ದೇಶದಲ್ಲಿ ಪ್ರತಿಮೆಗಳ ದಾಳಿ ಅಲ್ಲಲ್ಲಿ ವರದಿಯಾಗುತ್ತಿರುವ ನಡುವೆಯೇ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸರ್ದಾಸ್ ಪುರದಲ್ಲಿರುವ ಈ ಪ್ರತಿಮೆಯ ಒಂದು ಕೈಗೆ ಹಾನಿಯೆಸಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.
Next Story