ಸುಪ್ರೀಂ ಕೋರ್ಟ್ ಆದೇಶ ಪಾಲಿಸುತ್ತೇವೆ: ಯಡಿಯೂರಪ್ಪ
ಬೆಂಗಳೂರು, ಮೇ 18: ಶನಿವಾರವೇ ವಿಶ್ವಾಸಮತಯಾಚನೆ ನಡೆಸಬೇಕು ಎನ್ನುವ ಸುಪ್ರೀಂಕೋರ್ಟ್ ತೀರ್ಪಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡುತ್ತೇವೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ಸಭೆ ಕರೆಯಲಾಗುವುದು. ಸಭೆಯಲ್ಲಿ ಹಲವು ಚರ್ಚೆಗಳು ನಡೆಯಲಿದೆ. ನಾವು ಬಹುಮತ ಸಾಬೀತುಪಡಿಸುತ್ತೇವೆ ಎನ್ನುವ ಬಗ್ಗೆ ನಮಗೆ ನಂಬಿಕೆಯಿದೆ ಎಂದವರು ಹೇಳಿದರು.
Next Story