ಸಾಧ್ವಿ ಪ್ರಾಚಿ, ಮಾಜಿ ಕೇಂದ್ರ ಸಚಿವ ಸಂಜೀವ್ ಬಲ್ಯನ್ ವಿರುದ್ಧ ಜಾಮೀನುರಹಿತ ವಾರಂಟ್
ಮುಝಫ್ಫರ್ ನಗರ ಗಲಭೆ
ಹೊಸದಿಲ್ಲಿ, ಜೂ.4: ಮುಝಫ್ಫರ್ ನಗರ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಮುಂದೆ ಹಾಜರಾಗದ ಮಾಜಿ ಕೇಂದ್ರ ಸಚಿವ ಸಂಜೀವ್ ಬಲ್ಯನ್ , ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ, ಬಿಜೆಪಿ ಶಾಸಕ ಉಮೇಶ್ ಮಲಿಕ್ ಸೇರಿದಂತೆ ಇತರ ಇಬ್ಬರ ವಿರುದ್ಧ ಮುಝಫ್ಫರ್ ನಗರ ನ್ಯಾಯಾಲಯ ಜಾಮೀನುರಹಿತ ವಾರಂಟ್ ಜಾರಿ ಮಾಡಿದೆ.
ಅಡಿಶನಲ್ ಚೀಫ್ ಜ್ಯುಡಿಶಿಯಲ್ ಮ್ಯಾಜಸ್ಟ್ರೇಟ್ ಅಂಕುರ್ ಶರ್ಮಾ ಜಾಮೀನುರಹಿತ ವಾರಂಟ್ ಜಾರಿ ಮಾಡಿದ್ದು, ಜೂನ್ 22ರಂದು ಆರೋಪಿಗಳು ಕೋರ್ಟ್ ಗೆ ಹಾಜರಾಗಬೇಕೆಂದು ತಿಳಿಸಿದ್ದಾರೆ.
ಬಿಜನೋರ್ ಸಂಸದ ಭರತೇಂದು ಸಿಂಗ್, ಉತ್ತರ ಪ್ರದೇಶ ಸಚಿವ ಸುರೇಶ್ ರಾಣಾ, ಶಾಸಕ ಸಂಗೀತ್ ಸೋಮ್ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.
Next Story