ನೀತಿ ಆಯೋಗದ ಸಭೆಯಲ್ಲಿ ಮೊದಲ ಬಾರಿ ಸಿಎಂ ಹೆಚ್ ಡಿಕೆ ಭಾಗಿ
ಹೊಸದಲ್ಲಿ, ಜೂ.17: ನೀತಿ ಆಯೋಗದ ನಾಲ್ಕನೇ ಸಭೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರವಿವಾರ ಬೆಳಗ್ಗೆ ಆರಂಭಗೊಂಡಿದೆ.
ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಕಾರ , ಸ್ಪರ್ಧಾತ್ಮಕ ಒಕ್ಕೂಟ ವ್ಯವಸ್ಥೆಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.
ಜಿಎಸ್ ಟಿ ಯನ್ನು ಜಾರಿಗೊಳಿಸಲು ವಿವಿಧ ರಾಜ್ಯಗಳು ಸಹಕಾರ ನೀಡಿರುವುದಕ್ಕೆ ಪ್ರಧಾನಿ ಮೋದಿ ಅವರು ಶ್ಲಾಘನೆ ವ್ಯಕ್ತಪಡಿಸಿದರು.
ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೊದಲ ಬಾರಿ ಸಭೆಯಲ್ಲಿ ಭಾಗವಹಿಸಿದ್ದಾರೆ. ಮುಖ್ಯ ಕಾರ್ಯದರ್ಶಿ ರತ್ನಪ್ರಭಾ , ವಿವಿಧ ರಾಜ್ಯಗಳ ಮುಖ್ಯ ಮಂತ್ರಿಗಳು ಪಾಲ್ಗೊಂಡಿದ್ದಾರೆ.
Next Story