ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ಬಂಧನಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆ
ಹೊಸದಿಲ್ಲಿ, ಜು.10: ಏರ್ಸೆಲ್ ಮ್ಯಾಕ್ಸಿಸ್ ಹಣ ಅಕ್ರಮ ಸಾಗಣೆ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಅವರ ಬಂಧನಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ದಿಲ್ಲಿಯ ನ್ಯಾಯಾಲಯ ಆಗಸ್ಟ್ 7ರವರೆಗೆ ವಿಸ್ತರಿಸಿದೆ.
ಈ ಪ್ರಕರಣದಲ್ಲಿ ಎಲ್ಲಾ ಪುರಾವೆಗಳು ಸಾಕ್ಷಾಧಾರಗಳ ಸಹಿತ ಸರಕಾರದ ಬಳಿ ಇವೆ ಎನ್ನಲಾಗುತ್ತಿದೆ. ಆದ್ದರಿಂದ ತನ್ನಿಂದ ಪಡೆಯುವಂತಹ ಮಾಹಿತಿ ಏನೂ ಇಲ್ಲದಿರುವ ಕಾರಣ ತನಗೆ ಬಂಧನದಿಂದ ರಕ್ಷಣೆ ನೀಡಬೇಕೆಂದು ಕೋರಿ ಚಿದಂಬರಂ ಮೇ 30ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿಯನ್ನು ಜುಲೈ 10ರವರೆಗೆ ಬಂಧಿಸದಂತೆ ದಿಲ್ಲಿಯ ನ್ಯಾಯಾಲಯ ಆದೇಶಿಸಿತ್ತು. ಇದೀಗ ಈ ತಡೆಯಾಜ್ಞೆಯನ್ನು ಆಗಸ್ಟ್ 7ರವರೆಗೆ ವಿಸ್ತರಿಸಿದೆ.
Next Story