ತಾಜ್ಮಹಲ್ಗೆ ಅಪಾಯ ಇಲ್ಲ: ಮಹೇಶ್ ಶರ್ಮಾ
ಹೊಸದಿಲ್ಲಿ, ಜು. 13: ತಾಜ್ಮಹಲ್ಗೆ ಯಾವುದೇ ಅಪಾಯ ಇಲ್ಲ ಎಂದು ಕೇಂದ್ರದ ಸಹಾಯಕ ಸಚಿವ ಮಹೇಶ್ ಶರ್ಮಾ ಗುರುವಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಷಯದ ಕುರಿತು ಸರಕಾರ ಸುಪ್ರೀಂ ಕೋರ್ಟ್ಗೆ ಅಫಿದಾವಿತ್ ಸಲ್ಲಿಸಲಿದ್ದೇವೆ ಎಂದರು.
‘‘ತಾಜ್ಮಹಲ್ಗೆ ಯಾವುದೇ ಅಪಾಯ ಇಲ್ಲ ಎಂದು ಭರವಸೆ ನೀಡಲು ನಾನು ಬಯಸುತ್ತೇನೆ. ತಾಜ್ಮಹಲ್ನ ಮೂಲ ಬಣ್ಣದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ವಿಷಯಕ್ಕೆ ಸಂಬಂಧಿಸಿ ನಾವು ಸುಪ್ರೀಂ ಕೋರ್ಟ್ಗೆ ಅಫಿದಾವಿತ್ ಸಲ್ಲಿಸಲಿದ್ದೇವೆ’’ ಎಂದು ಅವರು ಹೇಳಿದ್ದಾರೆ.
ತಾಜ್ಮಹಲ್ ರಕ್ಷಣೆ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರ ಹಾಗೂ ಉತ್ತರಪ್ರದೇಶ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಒಂದು ದಿನದ ಬಳಿಕ ಶರ್ಮಾ ಅವರ ಈ ಹೇಳಿಕೆ ಹೊರಬಿದ್ದಿದೆ.
Next Story