ರಸ್ತೆಯಿಂದ ಜಾರಿ ಕಂದಕಕ್ಕೆ ಬಿದ್ದ ಬಸ್: 14 ಮಂದಿ ಮೃತ್ಯು
ಹೊಸದಿಲ್ಲಿ, ಜು.19: ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 14 ಮಂದಿ ಮೃತಪಟ್ಟು, 18 ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಸೂರ್ಯಧಾರ್ ಸಮೀಪದ ರಿಷಿಕೇಶ್-ಗಂಗೋತ್ರಿ ಹೆದ್ದಾರಿಯಲ್ಲಿ ಸ್ಕಿಡ್ ಆದ ಬಸ್ ಕಂದಕಕ್ಕೆ ಬಿದ್ದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲು ಹೆಲಿಕಾಪ್ಟರ್ ಗಳನ್ನು ಬಳಸಲಾಯಿತು. ರಕ್ಷಣಾ ಕಾರ್ಯಕ್ಕಾಗಿ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿದೆ.
Next Story