ದೇವಾಲಯದ ಒಳಗೆಯೇ ಅರ್ಚಕನಿಂದ ಮಹಿಳೆಯ ಅತ್ಯಾಚಾರ
ನೋಯ್ಡಾ, ಜು.29: ಗ್ರೇಟರ್ ನೋಯ್ಡಾದ ಗ್ರಾಮವೊಂದರಲ್ಲಿ ದೇವಾಲಯದ ಮುಖ್ಯ ಅರ್ಚಕ ದೇವಸ್ಥಾನದೊಳಗೆಯೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.
ಬಾದಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಧೂಮ್ ಮಾಣಿಕಪುರದಲ್ಲಿ ಈ ಘಟನೆ ಜುಲೈ 9ಕ್ಕೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆ ತನ್ನ ಸಂಬಂಧಿಯ ಜತೆಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಆಕೆಯನ್ನು ಕೊಠಡಿಗೆ ಕರೆದೊಯ್ದ ಅರ್ಚಕ ಅತ್ಯಾಚಾರ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ. ಆರೋಪಿ ಅರ್ಚಕನನ್ನು ಸ್ವಾಮಿ ಕನ್ಯಾನಂದ ಎಂದು ಗುರುತಿಸಲಾಗಿದ್ದು, ಘಟನೆ ಬಳಿಕ ಆತ ತಲೆಮರೆಸಿಕೊಂಡಿದ್ದಾನೆ ಎಂದು ಡಿವೈಎಸ್ಪಿ ಅವನೀಶ್ ಕುಮಾರ್ ಹೇಳಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದ್ದು, ಆರೋಪಿಯ ಪತ್ತೆಗೆ ಪ್ರಯತ್ನ ನಡೆದಿದೆ ಎಂದು ಅವರು ಹೇಳಿದ್ದಾರೆ.
Next Story