ಕರುಣಾನಿಧಿ ಆರೋಗ್ಯ ವಿಚಾರಿಸಿದ ರಾಹುಲ್, ರಜನೀಕಾಂತ್
ಚೆನ್ನೈ, ಆ.1: ಚೆನ್ನೈಯ ಕಾವೇರಿ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖಂಡ ಕರುಣಾನಿಧಿಯವರ ಆರೋಗ್ಯ ವಿಚಾರಿಸಿದರು.
ತೀವ್ರನಿಗಾ ಘಟಕದಲ್ಲಿ ದಾಖಲಾಗಿರುವ ಕರುಣಾನಿಧಿಯವರನ್ನು ಭೇಟಿ ಮಾಡಲು ಆಸ್ಪತ್ರೆಗೆ ತೆರಳಿದ್ದೇನೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ತಿಳಿಸಿದ್ದಾರೆ. ಅವರೊಂದಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಹಾಗೂ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಥಿರುನಾವುಕ್ಕರಸರ್ ಇದ್ದರು. ತಮಿಳು ಸೂಪರ್ಸ್ಟಾರ್ ರಜನೀಕಾಂತ್ ಅವರೂ ಆಸ್ಪತ್ರೆಗೆ ಭೇಟಿ ನೀಡಿ ಕರುಣಾನಿಧಿಯವರ ಆರೋಗ್ಯ ವಿಚಾರಿಸಿದರು ಎಂದು ಡಿಎಂಕೆ ಪಕ್ಷದ ಮೂಲಗಳು ತಿಳಿಸಿವೆ.
Next Story