ಆ.9ರಂದು ರಾಜ್ಯಸಭಾ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ
ಹೊಸದಿಲ್ಲಿ, ಆ.6: ರಾಜ್ಯ ಸಭೆಯ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ಆ.9ರಂದು ನಡೆಯಲಿದೆ.
ಉಪಸಭಾಪತಿ ಪ್ರೊ ಪಿ.ಜೆ ಕುರಿಯನ್ ಅವರ ಅಧಿಕಾರದ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಆ.8ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ರಾಜ್ಯ ಸಭೆಯ ಅಧ್ಯಕ್ಷ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಬಿಜೆಪಿಗೆ ರಾಜ್ಯಸಭೆಯಲ್ಲಿ ಬಹುಮತ ಇಲ್ಲದ ಕಾರಣದಿಂದಾಗಿ ಕಾಂಗ್ರೆಸ್ ತನ್ನ ಮಿತ್ರಪಕ್ಷಗಳ ಬೆಂಬಲದೊಂದಿಗೆ ಉಪಸಭಾಪತಿ ಹುದ್ದೆಗೆ ಅಭ್ಯರ್ಥಿ ಯನ್ನು ಕಣಕ್ಕಿಳಿಸಲಿದೆ. 2012ರಲ್ಲಿ ಪಿ.ಜೆ. ಕುರಿಯನ್ ರಾಜ್ಯಸಭೆಯ ಉಪಸಭಾಪತಿಯಾಗಿ ಆಯ್ಕೆಯಾಗಿದ್ದರು.
Next Story