ತಲ್ವಾರ್ ದಂಪತಿಗೆ ಮತ್ತೆ ಸಂಕಷ್ಟ
ಆರುಷಿ-ಹೇಮರಾಜ್ ಕೊಲೆ ಪ್ರಕರಣ
ಹೊಸದಿಲ್ಲಿ, ಆ.10: ಆರುಷಿ ತಲ್ವಾರ್ ಹಾಗು ಹೇಮರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲ್ವಾರ್ ದಂಪತಿಯನ್ನು ಬಿಡುಗಡೆಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಈ ವರ್ಷದ ಮೇ ತಿಂಗಳಲ್ಲಿ ಅರ್ಜಿ ಸಲ್ಲಿಸಿತ್ತು. ಹೇಮರಾಜ್ ಪತ್ನಿ ಸಲ್ಲಿಸಿದ ಅರ್ಜಿಯ ಜೊತೆ ಈ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ರಂಜನ್ ಗೊಗೊಯಿ, ನವೀನ್ ಸಿನ್ಹಾ ಮತ್ತು ಕೆ.ಎಂ.ಜೋಸೆಫ್ ರನ್ನೊಳಗೊಂಡಿದ್ದ ನ್ಯಾಯಪೀಠ ತಿಳಿಸಿದೆ.
2017 ಅಕ್ಟೋಬರ್ ನಲ್ಲಿ ತೀರ್ಪು ನೀಡಿದ್ದ ಹೈಕೋರ್ಟ್ ರಾಜೇಶ್-ನೂಪುರ್ ತಲ್ವಾರ್ ದಂಪತಿಯನ್ನು ಬಿಡುಗಡೆಗೊಳಿಸಿ ತೀರ್ಪು ನೀಡಿತ್ತು.
Next Story