ಕಾಶ್ಮೀರಿಗಳನ್ನು ಅಪ್ಪಿಕೊಳ್ಳುವುದರಿಂದ ಸಮಸ್ಯೆ ಬಗೆಹರಿಸಬಹುದೇ ಹೊರತು ಬುಲೆಟ್ ಗಳಿಂದಲ್ಲ: ಪ್ರಧಾನಿ ಮೋದಿ
ಹೊಸದಿಲ್ಲಿ, ಆ.15: ಕಾಶ್ಮೀರಿಗಳನ್ನು ಅಪ್ಪಿಕೊಳ್ಳುವುದರಿಂದ ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಬಹುದೇ ಹೊರತು, ಜನರನ್ನು ನಿಂದಿಸುವುದರಿಂದಲೋ ಅಥವಾ ಬುಲೆಟ್ ನಿಂದಲೋ ಅಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
72ನೆ ಸ್ವಾತಂತ್ರ್ಯೋತ್ಸವದ ಸಂದರ್ಭ ಕೆಂಪುಕೋಟೆಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರನ್ನು ತಾನು ಅನುಸರಿಸುತ್ತಿರುವುದಾಗಿ ತಿಳಿಸಿದರು.
“ಮಾನವೀಯತೆ, ಕಾಶ್ಮೀರಿಯತ್ ಮತ್ತು ಪ್ರಜಾಪ್ರಭುತ್ವಕ್ಕೆ ಅಟಲ್ ಜೀ ಕರೆ ನೀಡಿದ್ದರು. ಕಾಶ್ಮೀರಿಗಳನ್ನು ಅಪ್ಪಿಕೊಳ್ಳುವುದರಿಂದ ಮಾತ್ರ ಕಾಶ್ಮೀರದ ಸಮಸ್ಯೆ ಬಗೆಹರಿಸಬಹುದು ಎಂದು ನಾನೂ ಹೇಳಿದ್ದೆ” ಎಂದು ಪ್ರಧಾನಿ ಹೇಳಿದರು.
Next Story