ಒಂದು ತಿಂಗಳ ಸಂಬಳವನ್ನು ಕೇರಳಕ್ಕೆ ನೀಡಲಿರುವ ಕಾಂಗ್ರೆಸ್ ಶಾಸಕರು, ಸಚಿವರು, ಸಂಸದರು
ಹೊಸದಿಲ್ಲಿ, ಆ.18: ಭೀಕರ ಪ್ರವಾಹಕ್ಕೆ ಸಿಲುಕಿ ನಲುಗಿರುವ ಕೇರಳಕ್ಕೆ ನೆರವಾಗಲು ಕಾಂಗ್ರೆಸ್ ನ ಜನಪ್ರತಿನಿಧಿಗಳು ನಿರ್ಧರಿಸಿದ್ದಾರೆ. ಕಾಂಗ್ರೆಸ್ ನ ಎಲ್ಲಾ ಶಾಸಕರು, ಸಂಸದರು ಹಾಗು ಸಚಿವರು ತಮ್ಮ ಒಂದು ತಿಂಗಳ ಸಂಬಳವನ್ನು ಕೇರಳ ರಾಜ್ಯಕ್ಕೆ ನೀಡಲಿದ್ದಾರೆ.
ರಾಹುಲ್ ಗಾಂಧಿಯವರು ಪಕ್ಷದ ನಾಯಕರ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಪ್ರಧಾನಿ ಮೋದಿ ಇಂತಹ ವಿಷಯಗಳಲ್ಲಿ ರಾಜಕೀಯ ಮಾಡಬಾರದು. ಕೇರಳದ ಪರಿಸ್ಥಿತಿಯನ್ನು ‘ರಾಷ್ಟ್ರೀಯ ದುರಂತ’ ಎಂದು ಘೋಷಿಸಬೇಕು ಎಂದು ಅವರು ಆಗ್ರಹಿಸಿದರು.
Next Story