ನರೇಂದ್ರ ದಾಬೋಲ್ಕರ್ ಹತ್ಯೆಯ ಪ್ರಮುಖ ಆರೋಪಿ ಸೆರೆ
ಮುಂಬೈ,ಆ.18: ಪ್ರಗತಿಪರ ಚಿಂತಕ ನರೇಂದ್ರ ದಾಬೋಲ್ಕರ್ ಅವರನ್ನು ಹತ್ಯೆ ಮಾಡಿದ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಬಿಐ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಬಂಧಿತ ಆರೋಪಿಯನ್ನು ಸಚಿನ್ ಪ್ರಕಾಶ್ರಾವ್ ಅಂದುರೆ ಎಂದು ಗುರುತಿಸಲಾಗಿದ್ದು ಔರಂಗಬಾದ್ನಲ್ಲಿ ಆತನನ್ನು ಬಂಧಿಸಲಾಗಿದೆ. ಅಂದುರೆ, ದಾಬೋಲ್ಕರ್ ಅವರ ಮೇಲೆ ಗುಂಡು ಹಾರಿಸಿದ ಶೂಟರ್ಗಳಲ್ಲಿ ಓರ್ವನಾಗಿದ್ದ ಎಂದು ವರದಿಯಲ್ಲಿ ತಿಳಿಸಲಾಗಿದೆ.
Next Story