ಒಂದು ದಿನದ ಸಂಬಳವನ್ನು ಪರಿಹಾರ ನಿಧಿಗೆ ನೀಡಲಿರುವ ಆಂಧ್ರದ ಐಎಎಸ್ ಅಧಿಕಾರಿಗಳು
ಕೇರಳ ಪ್ರವಾಹ
ಅಮರಾವತಿ, ಆ.19: ಕೇರಳ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ತಮ್ಮ ಒಂದು ದಿನದ ಸಂಬಳವನ್ನು ನೀಡಲು ಆಂಧ್ರ ಪ್ರದೇಶದ ಐಎಎಸ್ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಭೀಕರ ಪ್ರವಾಹದಿಂದ ನಲುಗಿರುವ ಕೇರಳವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದ್ದರಿಂದ ಕೇರಳಕ್ಕೆ ನೆರವಾಗುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಐಎಎಸ್ ಅಧಿಕಾರಿಗಳು ಒಂದು ದಿನದ ಸಂಬಳವನ್ನು ನೀಡಲು ನಿರ್ಧರಿಸಿದ್ದಾರೆ ಎಂದು ಆಂಧ್ರ ಪ್ರದೇಶದ ಐಎಎಸ್ ಅಧಿಕಾರಿಗಳ ಅಸೋಸಿಯೇಶನ್ ಹೇಳಿದೆ.
Next Story