ಕೇರಳಕ್ಕೆ ಗೋವಾದಿಂದ 5 ಕೋ. ರೂ. ನೆರವು
ಪಣಜಿ, ಆ. 23: ಕೇರಳ ನೆರೆಯಿಂದ ತತ್ತರಿಸಿರುವ ಹಿನ್ನೆಲೆಯಲ್ಲಿ ಗೋವಾ ಸರಕಾರ ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ ನೀಡಿದೆ.
5 ಕೋಟಿ ರೂಪಾಯಿ ಅಲ್ಲದೆ, ಗೋವಾ ರಾಜ್ಯ ಸರಕಾರದ ಹಾಗೂ ಸ್ವಾಯತ್ತ ಸಂಸ್ಥೆಗಳ ಉದ್ಯೋಗಿಗಳು ಸ್ವಯಂಪ್ರೇರಿತವಾಗಿ ತಮ್ಮ ಒಂದು ದಿನದ ವೇತನವನ್ನು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುವ ನಿರೀಕ್ಷೆ ಇದೆ ಎಂದು ಗೋವಾ ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕರ್ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಹಿಂದಿರುಗಿದ ಬಳಿಕ ಈ ಹೇಳಿಕೆ ಹೊರಬಿದ್ದಿದೆ.
Next Story