ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡ ಉವೈಸಿ-ಪ್ರಕಾಶ್ ಅಂಬೇಡ್ಕರ್ ಪಕ್ಷಗಳು
ಮುಂಬೈ, ಸೆ.15: ಮುಂದಿನ ಲೋಕಸಭೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಲ್ ಇಂಡಿಯಾ ಮಜ್ಲಿಸೆ ಇತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮತ್ತು ಭಾರಿಪಾ ಬಹುಜನ್ ಮಹಾಸಂಘ ಮೈತ್ರಿ ಮಾಡಿಕೊಳ್ಳಲಿದೆ ಎಂದು ಎರಡೂ ಪಕ್ಷಗಳ ನಾಯಕರು ಇಂದಿಲ್ಲಿ ಘೋಷಿಸಿದ್ದಾರೆ.
ಎರಡೂ ಪಕ್ಷಗಳ ನಡುವೆ ಮಾತುಕತೆ ನಡೆದಿದ್ದು, ಸಕಾರಾತ್ಮಕ ಫಲಿತಾಂಶ ಬರಲಿದೆ ಎಂದು ಮಾಧ್ಯಮಗಳೊಂದಿಗೆ ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ ಹೇಳಿದ್ದಾರೆ.
“ಬಿಬಿಎಂ ನಾಯಕ ಪ್ರಕಾಶ್ ಅಂಬೇಡ್ಕರ್ ಅಕ್ಟೋಬರ್ 2ರಂದು ಔರಂಗಾಬಾದ್ ನಲ್ಲಿ ಸಾರ್ವಜನಿಕ ರ್ಯಾಲಿಯೊಂದನ್ನು ನಡೆಸಲಿದ್ದಾರೆ. ನಾನು ಕೂಡ ಇದರಲ್ಲಿ ಭಾಗವಹಿಸುತ್ತೇನೆ. ಮೈತ್ರಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಮತ್ತೆ ನೀಡಲಾಗುವುದು ಎಂದವರು ಹೇಳಿದರು.
Next Story