ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಬಿಷಪ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ
ಹೊಸದಿಲ್ಲಿ, ಸೆ. 18: ಅತ್ಯಾಚಾರದ ಆರೋಪಕ್ಕೆ ಒಳಗಾಗಿರುವ ಜಲಾಂಧರದ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆಯನ್ನು ಕೇರಳ ಉಚ್ಚ ನ್ಯಾಯಾಲಯ ಮಂಗಳವಾರ ಸೆಪ್ಟಂಬರ್ 25ಕ್ಕೆ ಮುಂದೂಡಿದೆ.
ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಪ್ರಾಂಕೊ ಮುಲಕ್ಕಲ್ ಬುಧವಾರ ಕೇರಳ ಪೊಲೀಸರ ಮುಂದೆ ಹಾಜರಾಗಲಿದ್ದಾರೆ. ಸನ್ಯಾಸಿನಿ ವಿರುದ್ಧ ಕ್ರಮ ತೆಗೆದುಕೊಂಡಿರುವುದಕ್ಕೆ ಅತ್ಯಾಚಾರ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂದು ಬಿಷಪ್ ಅವರು ಮನವಿಯಲ್ಲಿ ತಿಳಿಸಿದ್ದಾರೆ. ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಬಿಷಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೆಚ್ಚುತ್ತಿರುವ ಹಾಗೂ ಜೀಸಸ್ ಸನ್ಯಾಸಿನಿಯರ ಮಿಷನರಿ, ವಿವಿಧ ಚರ್ಚ್ಗಳ ಅಧಿಕಾರಿಗಳು ಕಳೆದ 10 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿರುವ ನಡುವೆ ನ್ಯಾಯಾಲಯ ಬಿಷಪ್ ಅವರಿಗೆ ನೋಟಿಸು ಜಾರಿ ಮಾಡಿತ್ತು.
Next Story